ಜನರಿಗೆ ಟೋಪಿ ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ

ಗುರುವಾರ, 4 ಮೇ 2023 (18:40 IST)
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನೋಡಿದ್ರೆ ಶ್ರೀಲಂಕಾ, ಪಾಕಿಸ್ತಾನದ ನಂತರ ಈ ದೇಶವನ್ನು ಕೆಟ್ಟ ಪರಿಸ್ಥಿತಿಗೆ ಕೊಂಡೊಯ್ಯುವಂತೆ ಕಾಣ್ತಿದೆ.. ಜನರಿಗೆ ಟೋಪಿ ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ ಎಂದು ಕಾಂಗ್ರೆಸ್​ ಪ್ರಣಾಳಿಕೆಯನ್ನು ಶಿಕಾರಿಪುರ ಬಿಜೆಪಿ ಅಭ್ಯರ್ಥಿ B.Y. ವಿಜಯೇಂದ್ರ ಹೀಯಾಳಿಸಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇವರ ಪ್ರಣಾಳಿಕೆಯನ್ನು ಗಮನಿಸಿದರೆ ದೇಶ ಆರ್ಥಿಕ ದಿವಾಳಿ ಆಗುವುದರಲ್ಲಿ ಯಾವುದೇ ಸಂದೇಹ ಇಲ್ಲ. ಲಾಟರಿ ಇಲ್ಲದೇ ಬಹುಮಾನ ಕೊಡಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ 75 ಪರ್ಸೆಂಟ್​​​​​​​​ ಮೀಸಲಾತಿ ಕೊಡ್ತೀವಿ ಅಂತಾರೆ.. ಅಂಬೇಡ್ಕರ್ ಎಲ್ಲಾ ಸಮಾಜದ ಜನರಿಗೆ ಅನುಕೂಲ ಆಗಬೇಕು ಅಂತಾ ಸಂವಿಧಾನ ಕೊಟ್ಟಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ನಾಡಿನ ಬಗ್ಗೆ, ದೇಶದ ಬಗ್ಗೆ ಬದ್ದತೆ ಇಲ್ಲ ಎಂದು ಕಿಡಿಕಾರಿದ್ರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ