ಜನಾರ್ದನ ರೆಡ್ಡಿ ಆಪ್ತರ ನ್ಯಾಯಾಂಗ ಬಂಧನ ವಿಸ್ತರಣೆ

ಮಂಗಳವಾರ, 28 ಮೇ 2013 (13:12 IST)
PTI
PTI
ಬೇಲಿಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಫ್‌ಎಸ್ ಅಧಿಕಾರಿ ಮನೋಜ್‌ಕುಮಾರ್‌ಗೆ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸಿ ಆದೇಶ ಹೊರಡಿಸಿದೆ.

ಅಲ್ಲದೆ, ಮಾಜಿ ಸಚಿವ ಜನಾರ್ದನ ರೆಡ್ಡಿಯ ಆಪ್ತರಾದ ಮುರಳಿ ಹಾಗೂ ಶ್ರೀನಿವಾಸ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದ್ದು, ಮೂವರು ಆರೋಪಿಗಳನ್ನು ನಗರದ ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿರಿಸಲಾಗಿದೆ.

ಬೇಲಿಕೇರಿಯಿಂದ ಕೋಟ್ಯಾಂತರ ರೂ.ಅದಿರು ನಾಪತ್ತೆಯಾದ ಸಂದರ್ಭದಲ್ಲಿ ಮನೋಜ್‌ಕುಮಾರ್ ಶುಕ್ಲಾ ಬಳ್ಳಾರಿಯ ಮುಖ್ಯ ಅರಣ್ಯ ಸಂರಕ್ಷಣಾಧಿ ಕಾರಿಯಾಗಿದ್ದರು. ಈ ಪ್ರಕರಣದ ವಿಚಾರಣೆಗಾಗಿ ಮನೋಜ್ ಕುಮಾರ್‌ರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ವೆಬ್ದುನಿಯಾವನ್ನು ಓದಿ