ಜನಾರ್ದನ ರೆಡ್ಡಿ ವಶಕ್ಕಾಗಿ ನ್ಯಾಯಾಲಯಕ್ಕೆ ಸಿಬಿಐ ಮನವಿ

ಬುಧವಾರ, 29 ಫೆಬ್ರವರಿ 2012 (02:11 IST)
PR
ರಾಜ್ಯದಲ್ಲಿನ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರ ವಿರುದ್ಧ ಬಾಡಿ ವಾರಂಟ್ ಹೊರಡಿಸಿದ್ದು, ವಿಚಾರಣೆಗೆ ತನ್ನ ವಶಕ್ಕೆ ನೀಡುವಂತೆ ಕೋರಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಅಸೋಸಿಯೆಟೆಡ್ ಮೈನಿಂಗ್ ಕಂಪೆನಿ (ಎಎಂಸಿ) ಹಾಗೂ ಇತರ ಗಣಿ ಕಂಪೆನಿಗಳ ಅಕ್ರಮ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ, ಎಎಂಸಿ ಮಾಲೀಕ ಜನಾರ್ದನ ರೆಡ್ಡಿ ಅವರನ್ನು ವಿಚಾರಣೆಗಾಗಿ ತನ್ನ ವಶಕ್ಕೆ ನೀಡುವಂತೆ ಹೈದರಾಬಾದ್ ಚಂಚಲಗುಡ ಕಾರಾಗೃಹದ ಅಧೀಕ್ಷಕರನ್ನು ಕೋರಿದೆ.

ವಿಚಾರಣೆಗಾಗಿ ಮಾರ್ಚ್ 2ರಂದು ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರು ಮತ್ತು ಬಳ್ಳಾರಿಗೆ ಕರೆತರುವ ಸಾಧ್ಯತೆ ಇದೆ. ಈಗಾಗಲೇ ಸಿಬಿಐ ಎಸ್ಪಿ ಸುಬ್ರಹ್ಮಣ್ಯರಾವ್ ಮತ್ತಿತರರು ಹೈದರಾಬಾದ್‌ಗೆ ತೆರಳಿದ್ದು, ರೆಡ್ಡಿ ಅವರನ್ನು ಅವರನ್ನು ರಾಜ್ಯಕ್ಕೆ ಕರೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ವೆಬ್ದುನಿಯಾವನ್ನು ಓದಿ