ಡಿಕೆಶಿ, ಬೇಗ್‌ಗೆ ಮಾತ್ರ ಸಚಿವ ಸ್ಥಾನ: ಕಾಂಗ್ರೆಸ್ ಶಾಸಕರಲ್ಲಿ ಭುಗಿಲೆದ್ದ ಅತೃಪ್ತಿ

ಮಂಗಳವಾರ, 31 ಡಿಸೆಂಬರ್ 2013 (17:06 IST)
PR
PR
ಬೆಂಗಳೂರು: ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಮುಂದಾಗಿದ್ದು, ಡಿಕೆಶಿ ಮತ್ತು ರೋಷನ್ ಬೇಗ್ ಅವರಿಗೆ ಮಾತ್ರ ಸಚಿವ ಸ್ಥಾನ ನೀಡಲು ನಿರ್ಧರಿಸಿರುವುದು ಅನೇಕ ಮಂದಿ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನದ ಹೊಗೆ ಎಬ್ಬಿಸಿದೆ. ಸಚಿವ ಸ್ಥಾನ ನೀಡದಿರುವ ಬಗ್ಗೆ ಕೋಪಗೊಂಡ ಇಬ್ಬರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದೆ. ಆದರೆ ಪ್ರಾತಿನಿಧ್ಯ ಇಲ್ಲದ ಜಿಲ್ಲೆಗಳ ಶಾಸಕರನ್ನು ಪರಿಗಣಿಸಿಲ್ಲ. ಸಂತೋಷ್ ಲಾಡ್ ಅವರನ್ನು ಕೈಬಿಟ್ಟಿರುವುದಕ್ಕೂ ಉತ್ತರಿಸಬೇಕಾಗುತ್ತದೆ ಎಂದು ರಾಣೆಬೆನ್ನೂರು ಕಾಂಗ್ರೆಸ್ ಶಾಸಕ ಕೋಳಿವಾಡ ಖಡಕ್ಕಾಗಿ ಹೇಳಿದ್ದಾರೆ. ಜನ ಇದನ್ನು ಕೂಡ ಯೋಚಿಸುತ್ತಾರೆ. ಜನರೇ ಈ ಬಗ್ಗೆ ತೀರ್ಮಾನಿಸ್ತಾರೆ. ಲೋಕಸಭೆ ಚುನಾವಣೆಯಲ್ಲಿ ಇದಕ್ಕೆ ನೀವು ಬೆಲೆ ತೆರಬೇಕಾಗುತ್ತದೆ ಎಂದು ಕೋಳಿವಾಡ ಎಚ್ಚರಿಸಿದರು.

ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವುದು ಸರಿಯಲ್ಲ. ಅಲ್ಲದೇ ಅನಿಲ್ ಲಾಡ್ ಅವರನ್ನು ಸಂಪುಟ ಸ್ಥಾನದಿಂದ ಕೈಬಿಟ್ಟಿರುವುದಕ್ಕೆ ಉತ್ತರಿಸಬೇಕಾಗುತ್ತದೆ ಎಂದು ಹೇಳಿದರು. ಏತನ್ಮಧ್ಯೆ, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ