ನಂದನ್ ನಿಲೇಕಣಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ರೆ ಸ್ಪರ್ಧಿಸುವ ಇಚ್ಛೆ

ಶುಕ್ರವಾರ, 10 ಜನವರಿ 2014 (19:25 IST)
PR
PR
ಬೆಂಗಳೂರು: ಇನ್ಫೋಸಿಸ್ ಸಹಸಂಸ್ಥಾಪಕ ನಂದನ್ ನಿಲೇಕಣಿ ತಾವು ಚುನಾವಣೆಗೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಹೇಳಿದ್ದಾರೆ. ಇದರಿಂದ ಅವರ ರಾಜಕೀಯ ಅಖಾಡಕ್ಕೆ ಪ್ರವೇಶದ ಬಗ್ಗೆ ಇದ್ದಿದ್ದ ಊಹಾಪೋಹಕ್ಕೆ ತೆರೆಬಿದ್ದಿದೆ. ರಾಜಕೀಯ ರಂಗದಲ್ಲಿ ನಾನು ಏನಾದರೂ ಮಾಡಬೇಕೆಂಬ ಆಸಕ್ತಿ ಹೊಂದಿದ್ದೇನೆ. ಏಕೆಂದರೆ ಭಾರತಕ್ಕೆ ಸಾಕಷ್ಟು ಬದಲಾವಣೆಯ ಅಗತ್ಯವಿದೆ. ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆಗೆ ಸ್ಪರ್ಧಿಸುವ ತಮ್ಮ ಬಯಕೆಯನ್ನು ವ್ಯಕ್ತಪಡಿಸಿದರು.

ಸರ್ಕಾರದ ಬೃಹತ್ ಆಧಾರ್ ಯೋಜನೆಯ ಅಧ್ಯಕ್ಷರಾಗಿದ್ದ ನಿಲೇಕಣಿ, ಕಾಂಗ್ರೆಸ್ ನನ್ನ ಕಲ್ಪನೆಗಳಿಗೆ ಬೆಂಬಲವಾಗಿ ನಿಂತಿದೆ ಮತ್ತು ಸಹಾನುಭೂತಿ ಹೊಂದಿದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವೇ ತಮ್ಮ ಆದ್ಯತೆ ಎಂದು ಸೂಚ್ಯವಾಗಿ ತಿಳಿಸಿದರು.

ವೆಬ್ದುನಿಯಾವನ್ನು ಓದಿ