ಪಂಚರಾಜ್ಯಗಳ ಎಲೆಕ್ಷನ್ ಬಳಿಕ ಕೆಪಿಸಿಸಿಯಲ್ಲಿ ಭಾರೀ ಬದಲಾವಣೆನಾ...?

ಸೋಮವಾರ, 13 ನವೆಂಬರ್ 2023 (19:00 IST)
ಪಂಚರಾಜ್ಯಗಳ ಚುನಾವಣೆಯ ಬಳಿಕ ಕೆಪಿಸಿಸಿಯಲ್ಲಿ ಭಾರೀ ಬದಲಾವಣೆಗಳು ಆಗಬಹುದು ಅನ್ನುವ ಹಿಂಟ್ ಸಿಕ್ತಾ ಇದೆ. ಅದರಲ್ಲೂ ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಮಾಡಲಾಗುತ್ತೆ ಅಂತ, ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಇದೀಗ ಪಂಚರಾಜ್ಯಗಳ ಚುನಾವಣೆಯ ಬ್ಯುಸಿಯಲ್ಲಿ ಕಾಂಗ್ರೆಸ್‌ನ ಹೈಕಮಾಂಡ್ ನಾಯಕರು ಇರೋದ್ರಿಂದ, ರಾಜ್ಯ ಕಾಂಗ್ರೆಸ್‌ನಲ್ಲಿ ಕೆಲವು ಬದಲಾವಣೆಗಳಿಗೆ ಕಾಲ ಕೂಡಿ ಬರ್ತಾ ಇಲ್ಲ. ಹಾಗಾಗಿ ಪಂಚರಾಜ್ಯಗಳ ಚುನಾವಣೆಯ ಬಳಿಕ ಕರುನಾಡಿನ ಕಾಂಗ್ರೆಸ್‌ನಲ್ಲಿ ಒಂದಷ್ಟು ಬದಲಾವಣೆಗಳು ಆಗಬಹುದು. ಆದರೆ ಸಚಿವ ಸತೀಶ್ ಜಾರಕಿಹೊಳಿ ಹೇಳುವಂತೆ, ಪಂಚರಾಜ್ಯಗಳ ಚುನಾವಣೆಯ ಬಳಿಕ, ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕವಾಗುತ್ತಂತೆ. ಹಾಗೇ ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವ ಬಗ್ಗೆ ಎಂಥದ್ದು ಸೂಚನೆ ಬಂದಿಲ್ಲವAತೆ..!

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ