ಬಿಎಸ್ಆರ್ ಅಭ್ಯರ್ಥಿ ಪೂಜಾ ಗಾಂಧಿಗೆ ಚುನಾವಣಾಧಿಕಾರಿ ಬಿಸಿ

ಬುಧವಾರ, 10 ಏಪ್ರಿಲ್ 2013 (15:02 IST)
PR
PR
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆಪಾದನೆ ಹಿನ್ನೆಲೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ರಾಯಚೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ನಟಿ ಪೂಜಾ ಗಾಂಧಿ ಅವರಿಗೆ ನೋಟಿಸ್ ನೀಡಲಾಗಿದೆ.

ಪಕ್ಷದಿಂದ ಚುನಾವಣಾ ಪ್ರಚಾರ ಕೈಗೊಳ್ಳುವ ಸಂದರ್ಭದಲ್ಲಿ ತಮ್ಮ ಬೆಂಬಲಿಗರು ಕಾರನ್ನು ಬಳಸಿದ್ದು ಅದಕ್ಕೆ ಅನುಮತಿ ಪಡೆದುಕೊಂಡಿರಲಿಲ್ಲ. ಈ ಸಂಬಂಧ ಪೊಲೀಸರು ನೀಡಿದ ಮಾಹಿತಿ ಅನ್ವಯ ಚುನಾವಣಾಧಿಕಾರಿ ಮಂಜುಶ್ರೀ ಪೂಜಾಗಾಂಧಿ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಕ್ಷೇತ್ರ ವ್ಯಾಪ್ತಿಯ ಮಿಟ್ಟಿ ಮಲ್ಕಾಪೂರ್ ಹಾಗೂ ದೇವನಪಲ್ಲಿ ಗ್ರಾಮಗಳಲ್ಲಿ ಎ.7ರಂದು ಪೂಜಾಗಾಂಧಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಪೂಜಾರಿಗೆ ನೋಟಿಸ್ ನೀಡಲಾಗಿದೆ. ಅಲ್ಲದೆ, ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಅವರಿಗೂ ನೀತಿ ಸಂಹಿತೆ ಉಲ್ಲಂಘನೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ವೆಬ್ದುನಿಯಾವನ್ನು ಓದಿ