ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿ ತೊರೆಯುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಲೋಕಸಭೆ ಮಾಜಿ ಸದಸ್ಯ ಮತ್ತು ಬಿಜೆಪಿ ಹಿರಿಯ ಮುಖಂಡ ಡಾ. ಬಿ.ಜಿ.ಜವಳಿ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಪತ್ರ ರವಾನಿಸಿದ್ದೇನೆ ಎಂದು ತಿಳಿಸಿರುವ ಜವಳಿ, ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಅಳಿಯ ಕೈಲಾಸನಾಥ ವಿ. ಪಾಟೀಲ ಪರವಾಗಿ ಚುನಾವಣಾ ಪ್ರಚಾರ ಮಾಡಲು ಬಯಸಿದ್ದೇನೆ. ಆದ್ದರಿಂದ ಬಿಜೆಪಿಗೆ ವಿದಾಯ ಹೇಳುತ್ತಿರುವುದಾಗಿ ತಿಳಿಸಿದರು.
ಮುಂದೆ ತಾವು ಯಾವ ಪಕ್ಷ ಸೇರ್ಪಡೆಗೊಳ್ಳಬೇಕು ಎಂಬುದರ ಕುರಿತು ಇನ್ನು ಒಂದೆರಡು ದಿನದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.