ಬಿಜೆಪಿ- ಕಾಂಗ್ರೆಸ್ ಘರ್ಷಣೆ: ಚಿತ್ರದುರ್ಗದ ಚಳ್ಳೆಕೆರೆಯಲ್ಲಿ ಪೊಲೀಸ್ ಲಾಠಿ ಚಾರ್ಜ್

ಗುರುವಾರ, 17 ಏಪ್ರಿಲ್ 2014 (15:47 IST)
PTI
ಮತದಾನ ಮಾಡಲು ಬಂದು ಸರದಿಯಲ್ಲಿ ನಿಂತ ಮತದಾರರಲ್ಲಿ ನೂಕು ನುಗ್ಗಲು ಉಂಟಾದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ ಘಟನೆ ವರದಿಯಾಗಿದೆ,

ಮತದಾನಕ್ಕೆ ಬಂದು ಸರದಿಯಲ್ಲಿ ನಿಂತಿದ್ದ ವಯೋವೃದ್ಧ ವ್ಯಕ್ತಿಗೆ ಪೊಲೀಸ್ ಅಧಿಕಾರಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಅಸಭ್ಯವಾಗಿ ವರ್ತಿಸಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮತಗಟ್ಟೆ ಬಳಿ ಉದ್ರಿಕ್ತ ವಾತಾವರಣ ಉಂಟಾಗಿರುವುದರಿಂದ ಸುಮಾರು ಒಂದು ಗಂಟೆಗಳ ಕಾಲ ಮತದಾನ ಸ್ಥಗಿತಗೊಳಿಸಲಾಗಿತ್ತು. ನಂತರ ಗ್ರಾಮದ ಹಿರಿಯರು ಮಧ್ಯಪ್ರವೇಶಿಸಿ ಚುನಾವಣೆ ಅಧಿಕಾರಿಗಳೊಂದಿಗೆ ಸಂಧಾನ ನಡೆಸಿದ್ದರಿಂದ ಮತ್ತೆ ಮತ ಹಾಕಲು ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತದಾರರಿಗೆ ಟೋಕನ್ ನೀಡಿ ಮತಗಟ್ಟೆಯ ಹತ್ತಿರದಲ್ಲಿರುವ ಹೋಟೆಲ್‌ಗಳಲ್ಲಿ ಉಚಿತವಾಗಿ ಊಟ ಮಾಡುವಂತೆ ಆಮಿಷ ಒಡ್ಡಿದ್ದಾರೆ ಎಂದು ಬಿಜೆಪಿ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ