ಬಿಜೆಪಿ ಸಮಾವೇಶಕ್ಕೆ 10 ಸಾವಿರ ಕಾರ್ಯಕರ್ತರ ಆಗಮನ

ಬುಧವಾರ, 29 ಫೆಬ್ರವರಿ 2012 (00:32 IST)
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಮರುಚುನಾವಣೆಗೆ ಈಗಾಗಲೇ ಬಿಜೆಪಿ ಸನ್ನದ್ದ ವಾಗಿದ್ದು ಈ ಹಿನ್ನಲೆಯಲ್ಲಿ ಫೆ.29ರಂದು ಪಕ್ಷದ ಕಚೇರಿಯ ಮುಂದೆ ಬೆಳಿಗ್ಗೆ ೧೦ ಗಂಟೆಗೆ ಸಮಾವೇಶ ನಡೆಯಲಿದೆ.ಸಮಾವೇಶದಲ್ಲಿ ಕೇವಲ ಉಡುಪಿ ಜಿಲ್ಲೆಯ ಕಾರ್ಯಕರ್ತರು ಭಾಗವಹಿಸಲಿದ್ದು ೧೦ ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದರು.

ಸಮಾವೇಶದ ಪ್ರಯುಕ್ತ ಯುವ ಕಾರ್ಯಕರ್ತರ ೫೦೦ ದ್ವಿಚಕ್ರ ವಾಹನದಲ್ಲಿ ೯:೩೦ಕ್ಕೆ ಮಲ್ಪೆಯಿಂದ ಸಮಾವೇಶದ ಸಭಾಂಗಣದ ತನಕ ವಾಹನ ಜಾಥ ನಡೆಯಲಿದೆ.ಬಳಿಕ ಸಮಾವೇಶ ನಡೆಯಲಿದ್ದು ಸಮಾವೇಶದಲ್ಲಿ ಮುಖ್ಯಮಂತ್ರಿ ಸದಾನಂದ ಗೌಡ,ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ,ಯಡಿಯೂರಪ್ಪ, ಅನಂತ್ ಕುಮಾರ್ ಸೇರಿದಂತೆ ಅನೇಕ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.ಬಳಿಕ ೧೧:೩೦ಕ್ಕೆ ಪಕ್ಷದ ಅಭ್ಯರ್ಥಿ ಸುನೀಲ್ ಕುಮಾರ್ ಅವರ ನಾಮಪತ್ರ ಸಲ್ಲಿಕೆಯಾಗಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ,ಎಪಿ‌ಎಮ್.ಸಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಯುವ ಮೋರ್ಚಾ ಅಧ್ಯಕ್ಷ ವಿಲಾಸ್ ನಾಯಕ್ ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ