ಬೆಂಗಳೂರಿನಲ್ಲಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಯತ್ನ

ಗುರುವಾರ, 3 ಏಪ್ರಿಲ್ 2014 (17:37 IST)
PR
PR
ಬೆಂಗಳೂರು: ಬೆಂಗಳೂರಿನ ಎಂಜಿ ರಸ್ತೆಯಲ್ಲಿ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬುದ್ಧಿಮಾಂದ್ಯ ಮಗಳ ಮೇಲೆ ಏಪ್ರಿಲ್ ಒಂದರಂದು ಅತ್ಯಾಚಾರದ ಯತ್ನ ನಡೆದಿದ್ದು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಪ್ರತಿಭಟಿಸಿ ಮೈಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಇವರು ರಾಮನಗರದ ಜಿಲ್ಲೆ ಬಿಡದಿ ನಿವಾಸಿಗಳಾಗಿದ್ದು, ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು.

ಗುರುಲಿಂಗಯ್ಯ ಎಂಬವರ ಮಗಳು ತೋಟದ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಅವಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರಕ್ಕೆ ಯತ್ನಿಸಿದ್ದರು. ತಮ್ಮ ಪುತ್ರಿಯ ಮೇಲೆ ಅತ್ಯಾಚಾರ ಯತ್ನದ ಬಗ್ಗೆ ಠಾಣೆಯಲ್ಲಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇವರು ರಾಮನಗರದ ತಾಯಪ್ಪನದೊಡ್ಡಿ ಗ್ರಾಮದವರು. ಗುರುಲಿಂಗಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಆರೋಪಿಯ ಮೇಲೆ ಯಾವುದೇ ಕೇಸು ದಾಖಲಿಸಿಲ್ಲ. ಯಾಕೆ ಪೊಲೀಸರು ಮೃದುಧೋರಣೆ ತಾಳಿದ್ದಾರೆ ಎಂದು ಕುಟುಂಬದವರು ಪ್ರಶ್ನಿಸಿದ್ದು, ಆತ್ಮಹತ್ಯೆಗೆ ಯತ್ನಿಸಿದರು.

ವೆಬ್ದುನಿಯಾವನ್ನು ಓದಿ