ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಭಾರೀ ಪ್ರಮಾಣದಲ್ಲಿ ಮತದಾರರಿಗೆ ಆಮಿಷ ಒಡ್ಡುವ ಮುನ್ಸೂಚನೆ ಲಭಿಸಲಾರಂಭಿಸಿದೆ. ಇನ್ನೂ ಎಲ್ಲರೂ ನಾಮಪತ್ರವನ್ನೇ ಸಲ್ಲಿಸಿಲ್ಲ. ಆಗಲೇ ರಾಜ್ಯದಲ್ಲಿ ಚುನಾವಣೆಗಾಗಿ ಬಳಸಲು ಉದ್ದೇಶಿಸಿದ್ದ 1.44 ಕೋಟಿ ಮೊತ್ತದ ನಗದು, ವಸ್ತು ವಶಪಡಿಸಿಕೊಳ್ಳಲಾಗಿದೆ. ಮತದಾರರ ಓಲೈಕೆಗೆ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಭಾರಿ ಪ್ರಮಾಣದಲ್ಲಿ ಹಣದ ಆಮಿಷವೊಡ್ಡುವ ಸಾಧ್ಯತೆ ಬಗ್ಗೆ ಚುನಾವಣಾ ಆಯೋಗ ಕೂಡ ಅನುಮಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ನಿಗಾ ವಹಿಸಲು ಸಿದ್ಧತೆ ನಡೆಸಿದೆ.
ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡಲು ಪ್ರಯತ್ನಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು. ರಾಜ್ಯದಲ್ಲಿ ಎಲ್ಲೆಡೆ ತಪಾಸಣೆ ಬಿಗಿಗೊಳಿಸಲಾಗಿದ್ದು, ಸಾರ್ವಜನಿಕರು ಕೂಡ ಮಾಹಿತಿ ಇದ್ದಲ್ಲಿ ಚುನಾವಣಾ ಆಯೋಗಕ್ಕೆ ನೀಡಬೇಕು.