ಮನೆಗಳಿಗೆ ನುಗ್ಗಿದ್ರು, ಮಹಿಳೆಯರು, ಮಕ್ಕಳ ಮೇಲೆ ಹಲ್ಲೆ ಮಾಡಿದ್ರು'

ಶನಿವಾರ, 28 ಡಿಸೆಂಬರ್ 2013 (13:14 IST)
PR
PR
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕೋಮುಗಲಭೆ ಸಂಭವಿಸಿದ್ದು, ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ನಡುವೆ ಘರ್ಷಣೆ ಸಂಭವಿಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಗಡಿ, ಮುಂಗಟ್ಟುಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದಲ್ಲಿ ಅಘೋಷಿತ ಬಂದ್ ವಾತಾವರಣ ನೆಲೆಸಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆಂದು ಮಾಹಿತಿ ಸಿಕ್ಕಿದೆ. ಪೊಲೀಸರು ಗಲಭೆಯಲ್ಲಿ ನಿರತರಾಗಿದ್ದ ಜನರ ಮೇಲೆ ಮನಬಂದಂತೆ ಥಳಿಸಿದ್ದಾರೆ.

ಇಂದು ಬೆಳಿಗ್ಗೆ ಎರಡು ಕೋಮಿನ ಜನರ ನಡುವೆ ಸಣ್ಣ ವ್ಯಾಜ್ಯ ಉಲ್ಬಣಿಸಿ, ಮನೆಗಳಿಗೆ ನುಗ್ಗಿ ಹೆಂಗಸರು, ಮಕ್ಕಳ ಮೇಲೆ ಕೂಡ ಹಲ್ಲೆಗಳನ್ನು ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಇದುವರೆಗೆ ಜೀವಹಾನಿಯಾದ ವರದಿಯಾಗಿಲ್ಲ.ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ.

ವೆಬ್ದುನಿಯಾವನ್ನು ಓದಿ