ಮುತಾಲಿಕ್ ವಿರುದ್ಧ ದೂರು ದಾಖಲು

ಮಂಗಳವಾರ, 16 ಸೆಪ್ಟಂಬರ್ 2008 (20:20 IST)
ಧಾರವಾಡದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ದೂರು ದಾಖಲಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಮೋದ್ ಮುತಾಲಿಕ್ ವಿರುದ್ಧ ದೂರು ದಾಖಲಿಸಿರುವುದನ್ನು ಖಂಡಿಸಿರುವ ಶ್ರೀರಾಮಸೇನೆಯ ಕಾರ್ಯಕರ್ತರು ಮಂಗಳವಾರ ಸಂಜೆ ಶಹರಾ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.

ಅಲ್ಲದೇ ಮುತಾಲಿಕ್ ವಿರುದ್ಧ ದಾಖಲಾಗಿರುವ ಮೊಕದ್ದಮೆಯನ್ನು ಹಿಂಪಡೆಯುವಂತೆ ಶ್ರೀರಾಮಸೇನೆಯ ಕಾರ್ಯಕರ್ತರು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.

ವೆಬ್ದುನಿಯಾವನ್ನು ಓದಿ