ಮುಳುಗುತ್ತಿರುವವರಿಗೆ ಹುಲ್ಲುಕಡ್ಡಿಯ ಆಸರೆ: ಬಿಎಸ್‌ವೈ ಕುರಿತು ಹಿರೇಮಠ್ ವ್ಯಂಗ್ಯ

ಗುರುವಾರ, 24 ಅಕ್ಟೋಬರ್ 2013 (20:44 IST)
PR
PR
ಬೆಂಗಳೂರು: ಮುಳುಗುವವರಿಗೆ ಹುಲ್ಲುಕಡ್ಡಿ ಆಸರೆ ಎನ್ನುವಂತಾಗಿದೆ ಎಂದು ಬಿ. ಎಸ್‌. ಯಡಿಯೂರಪ್ಪ ಎನ್‌ಡಿಎಗೆ ಸೇರುವುದಕ್ಕೆ ನಡೆಸುತ್ತಿರುವ ಪ್ರಯತ್ನದ ಬಗ್ಗೆ ಸಮಾಜ ಪರಿವರ್ತನಾ ಸಂಘದ ಅಧ್ಯಕ್ಷ ಹಿರೇಮಠ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರಿಂದ ಅರ್ಜಿ ಸಲ್ಲಿಕೆಯಾಗಿರುವುದು ಇದು ಮುಳುಗುತ್ತಿರುವವರಿಗೆ ಹುಲ್ಲುಕಡ್ಡಿಯ ಆಸರೆ ನೀಡಿದಂತಾಗುತ್ತದೆ ಎಂದು ಹಿರೇಮಠ್ ಪ್ರತಿಕ್ರಿಯಿಸಿದರು.ಬಿಜೆಪಿಗೆ ತಾವು ಮರಳುವ ಬಗ್ಗೆ ಅಥವಾ ತಮ್ಮ ನೇತೃತ್ವದ ಕೆಜೆಪಿ ಜತೆ ಹೊಂದಾಣಿಕೆ ಮಾಡಿಕೊಳ್ಳುವುದರ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ನನ್ನ ದಾರಿ ನನಗೆ, ನಿಮ್ಮ ದಾರಿ ನಿಮಗೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಎಚ್ಚರಿಕೆಯ ಸಂದೇಶ ರವಾನಿಸಿದ್ದರು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನ. 17ರಂದು ಬೆಂಗಳೂರಿಗೆ ಆಗಮಿಸುವ ಮೊದಲೇ ಸ್ಥಾನ ಹೊಂದಾಣಿಕೆ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಗಡುವನ್ನು ಕೂಡ ಬಿಎಸ್‌ವೈ ವಿಧಿಸಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಎನ್‌ಡಿಎಗೆ ಸೇರುವ ತರಾತುರಿಯನ್ನು ನೋಡಿ ಹಿರೇಮಠ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ವೆಬ್ದುನಿಯಾವನ್ನು ಓದಿ