ಯಡಿಯೂರಪ್ಪ ಪರ ಬ್ಯಾಟ್ ಬೀಸಿದ ಕೇಂದ್ರ ಸಚಿವ

ಸೋಮವಾರ, 20 ಜನವರಿ 2020 (20:12 IST)
ರಾಜ್ಯದ ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಪರವಾಗಿ ಕೇಂದ್ರ ಸಚಿವರು ಬ್ಯಾಟಿಂಗ್ ಮಾಡಿದ್ದಾರೆ.

ರಾಜ್ಯದ ಸಚಿವ ಸಂಪುಟ ವಿಸ್ತರಣೆ ಆಗೇ ಆಗುತ್ತದೆ. ಸಚಿವ ಸ್ಥಾನದ ಬಗ್ಗೆ ಬಿ.ಎಸ್.ಯಡಿಯೂರಪ್ಪ ನೀಡಿರೋವಂಥ ಎಲ್ಲಾ ಮಾತುಗಳನ್ನು ಉಳಿಸಿಕೊಳ್ತಾರೆ.  ಹೀಗಂತ ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.

ಇನ್ನು, ಕಾನೂನಿನ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಇರೋದ್ರಿಂದ ಕೆಲವರು ಸಿಎಎ ಹಾಗೂ ಎನ್ ಆರ್ ಸಿ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ ಅಂತ ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ.

ಆ ಮೂಲಕ ಸಿಎಎ, ಎನ್ ಆರ್ ಸಿ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪರ ಪರವಾಗಿ ಅವರು ಬ್ಯಾಟ್ ಬೀಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ