ಸಂವಿಧಾನಬದ್ಧವಾಗಿ ರಾಜ್ಯಪಾಲರು ಯಾವ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂಬುದು ಅವರಿಗೆ ಗೊತ್ತಿರಬೇಕು. ಅದನ್ನು ಪದೇ ಪದೇ ನೆನಪು ಮಾಡಿಕೊಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅನಂತಕುಮಾರ್ ಹೇಳಿದ್ದಾರೆ.
ಲೋಕಾಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು.ಇಲ್ಲವಾದಲ್ಲಿ ಅಪವಾದಗಳಿಗೆ ಗುರಿಯಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆದರೆ, ಲೋಕಾಯುಕ್ತರ ನೇಮಕ ಗೊಂದಲ ಸೇರಿದಂತೆ ರಾಜ್ಯ ರಾಜಕೀಯ ಕುರಿತ ಯಾವುದೇ ಪ್ರಶ್ನೆಗಳಿಗೂ ಉತ್ತರ ನೀಡಲು ನಿರಾಕರಿಸಿದರು. ತಮ್ಮ ಭಾಷಣದಲ್ಲೂ ಅನಂತಕುಮಾರ್ ಎಂದಿನಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಪ್ರಸ್ತಾಪಿಸಿದರೇ ಹೊರತು ರಾಜ್ಯ ರಾಜಕಾರಣದ ಬಗ್ಗೆ ಚಕಾರ ಎತ್ತಲಿಲ್ಲ.
ಈ ಸಂದರ್ಭ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ, ಶಾಸಕ ಅಶ್ವತ್ಥನಾರಾಯಣ ಮೊದಲಾದವರು ಉಪಸ್ಥಿತರಿದ್ದರು.