ರಾಮನಗರದಲ್ಲೇ ಕುಮಾರಸ್ವಾಮಿ ಸ್ಪರ್ಧಿಸುವುದಕ್ಕೆ ಪತ್ನಿ ಅನಿತಾ ಮನವೊಲಿಕೆ

PR
PR
ಬೆಂಗಳೂರು: ಜೀವರಾಜ್ ಆಳ್ವ ಅವರ ಪತ್ನಿ ನಂದಿನಿ ಆಳ್ವ ಅವರು ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸುವ ಸಾಧ್ಯತೆಯಿದೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ನಂದಿನಿ ಆಳ್ವ ಅವರು ಭೇಟಿ ಮಾಡಿ ಈ ಕುರಿತು ಮಾತುಕತೆ ನಡೆಸಿದ್ದಾರೆ. ಏತನ್ಮಧ್ಯೆ ಕುಮಾರಸ್ವಾಮಿ ಅವರು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸದಂತೆ ಅವರ ಮನವೊಲಿಸಿ ಎಂದು ಅನಿತಾಕುಮಾರ ಸ್ವಾಮಿ ದೇವೇಗೌಡರ ಮೊರೆ ಹೋಗಿದ್ದಾರೆ. ರಾಮನಗರದ ಮತದಾರರು ಕಷ್ಟಕಾಲದಲ್ಲಿ ನಮ್ಮನ್ನು ಕೈಹಿಡಿದಿದ್ದಾರೆ. ಅವರಿಗೆ ದ್ರೋಹ ಮಾಡುವುದು ಬೇಡ. ಆದ್ದರಿಂದ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಬದಲಿಗೆ ರಾಮನಗರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡಲಿ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಇತ್ತೀಚೆಗೆ ಕುಮಾರಸ್ವಾಮಿ ತಾವು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ಸಮಾವೇಶದಲ್ಲಿ ಘೋಷಿಸಿದ್ದರು. ಇದರಿಂದ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ವಿರುದ್ಧ ಕುಮಾರಸ್ವಾಮಿ ಹಣಾಹಣಿಗೆ ವೇದಿಕೆ ಸಿದ್ದವಾಗಿತ್ತು.

ವೆಬ್ದುನಿಯಾವನ್ನು ಓದಿ