ಲೋಕಸಭೆಗೆ ಬೆಂಗಳೂರು ಗ್ರಾಮಾಂತರದಿಂದ ದೇವೇಗೌಡರ ಸ್ಪರ್ಧೆ?

ಮಂಗಳವಾರ, 4 ಫೆಬ್ರವರಿ 2014 (18:20 IST)
PR
PR
ಲೋಕಸಭಾ ಚುನಾವಣೆಗೆ ಜೆಡಿಎಸ್ ತೀವ್ರ ಕಸರತ್ತು ನಡೆಸಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಈ ಬಾರಿ ದೇವೇಗೌಡರು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಉನ್ನತ ಮೂಲಗಳು ಮಾಹಿತಿ ನೀಡಿವೆ. ಅನಿತಾ ಕುಮಾರ ಸ್ವಾಮಿ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲಿದ್ದಾರೆ. ಹಾಸನದಿಂದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಕಣಕ್ಕಿಳಿಯಲಿದ್ದಾರೆ. ದೇವೇಗೌಡರು ಹಾಸನದಿಂದ ಚುನಾವಣೆಗೆ ಸ್ಪರ್ಧಿಸಬಹುದೆಂದು ನಿರೀಕ್ಷಿಸಲಾಗಿತ್ತು. ದೇವೇಗೌಡರು ಸ್ಪರ್ಧಿಸಿದರೆ ಹಾಸನದಲ್ಲಿ ಅವರ ವಿರುದ್ಧ ಕಣಕ್ಕಿಳಿಯುವುದಾಗಿ ಕರ್ನಾಟಕ ಮಕ್ಕಳ ಪಕ್ಷದ ಅಶೋಕ್ ಖೇಣಿ ಹೇಳಿದ್ದರು. ಇನ್ನು ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆಯೇ ಇಲ್ಲವೇ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಕುಮಾರಸ್ವಾಮಿ ಮುಂಚೆ ಲೋಕಸಭೆ ಸದಸ್ಯರಾಗಿದ್ದವರು ವಿಧಾನಸಭೆ ಶಾಸಕರಾಗಿ ಆಯ್ಕೆಯಾದ ಬಳಿಕ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಅವರು ಮತ್ತೆ ಲೋಕಸಭೆ ಅಭ್ಯರ್ಥಿಯಾಗಿ ನಿಲ್ಲುವುದಕ್ಕೆ ಮತದಾರರ ಒಂದು ವರ್ಗದಲ್ಲೇ ವಿರೋಧವಿದೆ.

ವೆಬ್ದುನಿಯಾವನ್ನು ಓದಿ