ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸ್ಥಾನ ಬದಲು: ಈಶ್ವರಪ್ಪ

ಸೋಮವಾರ, 22 ಜುಲೈ 2013 (14:05 IST)
PR
ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಯಾವಾಗ ಕೆಳಗಿಳಿಸುತ್ತದೆ ಎನ್ನುವುದು ಗೊತ್ತಿಲ್ಲ.ಲೋಕಸಭೆ ಚುನಾವಣೆಗೂ ಮುನ್ನವೇ ಅವರ ಭವಿಷ್ಯ ನಿರ್ಣಯವಾಗಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ನಗರದ ವನಶ್ರೀ ಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಕೆಜೆಪಿ ಸ್ಥಾಪನೆಯಿಂದ ಬಿಜೆಪಿ ಮತಗಳು ವಿಭಜನೆಯಾಗಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಲಾಭವಾಯಿತು. ಆದರೆ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 20 ಸ್ಥಾನ ಪಡೆದು ಜಯಭೇರಿ ಬಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಸದ್ಯ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರವನ್ನು ಹಿಡಿದಿಡಲು 2 ಸಮಿತಿಗಳನ್ನು ರಚಿಸಿರುವುದು ದುರಂತ. ಮುಖ್ಯಮಂತ್ರಿ ಹಾಗೂ ಸಚಿವರು ಹೈಕಮಾಂಡನ ಕೈಗೊಂಬೆಯಂತಾಗಿದ್ದಾರೆ ಎಂದು ಟೀಕಿಸಿದರು.

ಮೋದಿ ಯುವಕರಿಗೆ ಸ್ಫೂರ್ತಿ: ಯುವಕರಿಗೆ ಸ್ಫೂರ್ತಿಯಾದ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯನ್ನು ಪ್ರಧಾನಿಯನ್ನಾಗಿಸಲು ಯುವ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದರು.

ವೆಬ್ದುನಿಯಾವನ್ನು ಓದಿ