ಬೆಂಗಳೂರು: ರಾಣೆಯಲ್ಲೇ ಲಂಚ ಪಡೆಯುತ್ತಿದ್ದಾಗ ಅಲಸೂರು ಗೇಟ್ ಇನ್ಸ್ಪೆಕ್ಟರ್ ದೀಪಕ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಿಕ್ರಿಯೇಷನ್ ಕ್ಲಬ್ಗೆ ಅನುಮತಿ ನೀಡಲು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರು ಬಲೆ ಬೀಸಿದರು. ದೀಪಕ್ ಮತ್ತು ಓರ್ವ ಪೇದೆ 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ಮಂಜುನಾಥ್ ಎಂಬ ರಿಕ್ರಿಯೇಷನ್ ಕ್ಲಬ್ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಮಂಜುನಾಥ್ ಇನ್ಸ್ಪೆಕ್ಟರ್ಗೆ ಹಣ ನೀಡುವಾಗ ರೆಡ್ ಹ್ಯಾಂಡ್ ಆಗಿ ಇನ್ಸ್ಪೆಕ್ಟರ್ ಅವರನ್ನು ಬಲೆಗೆ ಕೆಡವಿದ್ದಾರೆ.