ಕೆಲವೇ ತಿಂಗಳಲ್ಲಿ ರಾಜ್ಯ ಸರ್ಕಾರ ಅಸ್ಥಿರವಾಗಲಿದೆ ಮತ್ತು ಸಿದ್ದು ನಾಯಕತ್ವ ಬದಲಾವಣೆಯಾಗಲಿದೆ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಇನ್ನು 8 ರಿಂದ 10 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಯಮ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ತಿಳಿಸಿದ್ದಾರೆ.
ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶಿವಯೋಗಿ ರಾಜೇಂದ್ರ ಶ್ರೀಗಳು, ಇನ್ನು ಜಾಗತಿಕ ಜಲ ಆಪತ್ತು ಸಂಭವಿಸಲಿದೆ ಎಂದು ಸಹ ಅವರು ಭವಿಷ್ಯ ನುಡಿದರು.
ಇದೇ ವೇಳೆ ಮೂಢನಂಬಿಕೆ ವಿರೋಧಿ ಕಾನೂನಿನ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠದ ಸ್ವಾಮೀಜಿ, ಕಾನೂನಿನಿಂದಲೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ಹೀಗಾಗಿ ನೈಜತೆಯ ಬಗ್ಗೆ ಜನರಿಗೆ ತಿಳಿಸಬೇಕಿದೆ ಎಂದರು.