ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ, ರೋಷನ್ ಬೇಗ್

ಬುಧವಾರ, 1 ಜನವರಿ 2014 (18:06 IST)
PR
PR
ಬೆಂಗಳೂರು: ರಾಜಭವನದ ಬಾಂಕ್ವೆಟ್ ಹಾಲ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ರೋಷನ್ ಬೇಗ್ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರತಿಜ್ಞಾವಿಧಿ ಬೋಧಿಸಿದರು. ದೆಹಲಿ ದೊರೆಗಳ ಆದೇಶಕ್ಕೆ ಸಿಎಂ ಸಿದ್ದರಾಮಯ್ಯ ತಲೆಬಾಗಿ ಕಳಂಕಿತ ಸಚಿವರಿಗೆ ಸಚಿವ ಪಟ್ಟ ನೀಡಿದ್ದಾರೆಂಬ ಕೂಗು ಕೇಳಿಬರುತ್ತಿದೆ.

PR
PR
ಭ್ರಷ್ಟಾಚಾರ ಮತ್ತು ಕಳಂಕಿತ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಬಿಜೆಪಿ ಸರ್ಕಾರವಿದ್ದಾಗ ಪಾದಯಾತ್ರೆ ಮಾಡಿದ್ದ ಸಿದ್ದರಾಮಯ್ಯ ಈಗ ಕಳಂಕಿತರಿಗೆ ಮಣೆ ಹಾಕಿದ್ದಾರೆಂಬ ಟೀಕೆ ವ್ಯಕ್ತವಾಗಿದೆ. ಬಹುಶಃ ಸಿದ್ದರಾಮಯ್ಯ ಹೈಕಮಾಂಡ್ ಒತ್ತಡಕ್ಕೆ ಮಣಿದು ವಿಧಿಯಲ್ಲದೇ ಅವರಿಗೆ ಸಚಿವ ಸ್ಥಾನ ನೀಡಿರಬಹುದೆಂದು ಹೇಳಲಾಗುತ್ತಿದೆ. ಆದರೆ ಭ್ರಷ್ಟ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರಿಂದ ನೇರವಾಗಿ ಕಾಂಗ್ರೆಸ್ ಪಕ್ಷಕ್ಕೆ ಕಳಂಕ ತಟ್ಟುತ್ತದೆ. ಇದು ಮುಂದಿನ ಲೋಕಸಭೆ ಚುನಾವಣೆಯಲ್ಲೂ ಪರಿಣಾಮ ಬೀರಬಹುದು ಎಂದು ಹೇಳಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ