ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ‘ಸಮನ್ವಯ ಸಮಿತಿ’ ಸಭೆಗೆ ಭಾಗವಹಿಸಲು ಇಂದು ಬೆಳಿಗ್ಗೆ 10.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ದೆಹಲಿಗೆ ಹೊಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೊದಲ ಬಾರಿ ನಡೆಯುತ್ತಿರುವ ಈ ಸಮನ್ವಯ ಸಮಿತಿಯಲ್ಲಿ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಮತ್ತು ಲೋಕಭಾ ಚುನಾವಣೆ ಸಿದ್ದತೆಯ ಕುರಿತು ಈ ಸಭೆಯಲ್ಲಿ ಚರ್ಚೇನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ,
ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಮುಖಂಡ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ನಾಳಿನ ಸಭೆಯಲ್ಲಿ ಭಾಗ ವಹಿಸಲು ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಮಾದ್ಯಮಗಳು ವರದಿ ಮಾಡಿವೆ.