ಸಮನ್ವಯ ಸಿಮಿತಿ ಸಭೆ: ದೆಹಲಿಗೆ ತೆರಳಲಿರುವ ಸಿಎಂ

ಸೋಮವಾರ, 18 ನವೆಂಬರ್ 2013 (10:16 IST)
PR
ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ‘ಸಮನ್ವಯ ಸಮಿತಿ’ ಸಭೆಗೆ ಭಾಗವಹಿಸಲು ಇಂದು ಬೆಳಿಗ್ಗೆ 10.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ದೆಹಲಿಗೆ ಹೊಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೊದಲ ಬಾರಿ ನಡೆಯುತ್ತಿರುವ ಈ ಸಮನ್ವಯ ಸಮಿತಿಯಲ್ಲಿ ನಿಗಮ ಮಂಡಳಿಗೆ ಅಧ್ಯಕ್ಷರ ಆಯ್ಕೆ ಮತ್ತು ಲೋಕಭಾ ಚುನಾವಣೆ ಸಿದ್ದತೆಯ ಕುರಿತು ಈ ಸಭೆಯಲ್ಲಿ ಚರ್ಚೇನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ,

ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಮುಖಂಡ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ನಾಳಿನ ಸಭೆಯಲ್ಲಿ ಭಾಗ ವಹಿಸಲು ದೆಹಲಿಗೆ ತೆರಳುವ ಸಾಧ್ಯತೆ ಇದೆ ಎಂದು ಮಾದ್ಯಮಗಳು ವರದಿ ಮಾಡಿವೆ.

ವೆಬ್ದುನಿಯಾವನ್ನು ಓದಿ