ಸೋನಿಯಾ ಗಾಂಧಿ ಸಭೆಯಲ್ಲಿ ರಂಪ, ರಾದ್ಧಾಂತ

ಸೋಮವಾರ, 30 ಸೆಪ್ಟಂಬರ್ 2013 (17:41 IST)
PR
PR
ಮಂಡ್ಯ: ಸೋನಿಯಾ ಗಾಂಧಿ ಸಭೆಯಲ್ಲಿ ರಂಪ, ರಾದ್ಧಾಂತ ಕೂಡ ನಡೆಯಿತು. ದಲಿತ ಸಂಘರ್ಷ ಸಮಿತಿ ಹಾಗೂ ಕೆಲವು ಸಂಘಟನೆಗಳ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಸಂಸತ್ತಿನಲ್ಲಿ ಮತ್ತು ವಿಧಾನಸಭೆಗಳಲ್ಲಿ ಕಳಂಕಿತ ಸದಸ್ಯರನ್ನು ರಕ್ಷಿಸುವ ದೃಷ್ಟಿಯಿಂದ ಸುಗ್ರೀವಾಜ್ಞೆಯನ್ನು ಜಾರಿ ಮಾಡಬಾರದು ಎಂದು ಆಗ್ರಹಿಸಿದರು.

ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಕಾರ್ಯತರ್ಕರು ಕಪ್ಪು ಬಾವುಟ ಪ್ರದರ್ಶಿಸಿದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದರು. ಪೊಲೀಸರು ಈ ಸಂದರ್ಭದಲ್ಲಿ ಹಲವಾರು ಜನರನ್ನು ವಶಕ್ಕೆ ತೆಗೆದುಕೊಂಡರು.

ವೆಬ್ದುನಿಯಾವನ್ನು ಓದಿ