‘ರಾಗಾ’ ರಾಜ್ಯ ಪ್ರವಾಸ ಏ.16ಕ್ಕೆ ಮುಂದೂಡಿಕೆ

ಶನಿವಾರ, 8 ಏಪ್ರಿಲ್ 2023 (20:40 IST)
ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೂರು ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ನಾಯಕರು ಗೆಲ್ಲಲೇಬೇಕೆಂಬ ಪಣ ತೊಟ್ಟಿದ್ದಾರೆ. ಹೀಗಾಗಿ ಹಲವೆಡೆ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಮತ್ತೆ ಮುಂದೂಡಿಕೆಯಾಗಿದೆ. ಏಪ್ರಿಲ್​​ 10ರಂದು ನಡೆಯಬೇಕಿದ್ದ ಕೋಲಾರ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ. ಏಪ್ರಿಲ್ 16ರಂದು ರಾಹುಲ್ ಗಾಂಧಿ ಸಮಾವೇಶ ಮತ್ತೆ ಆಯೋಜನೆ ಮಾಡುವ ಸಾಧ್ಯತೆಯಿದೆ. ಶುಕ್ರವಾರ ರಾತ್ರಿ KPCC ಅಧ್ಯಕ್ಷ D.K. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್ ಸಿಂಗ್​​​ ಸುರ್ಜೆವಾಲಾ ನೇತೃತ್ವದಲ್ಲಿ ನಡೆದಿದ್ದ ಕೋಲಾರ ನಾಯಕರ ಸಭೆಯಲ್ಲಿ ಚರ್ಚೆ ನಡೆಸಿ ಮುಂದೂಡಿಕೆ ಆಗಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಇನ್ನು ಈ ಕುರಿತು KPCC ಅಧ್ಯಕ್ಷ D.K. ಶಿವಕುಮಾರ್​​​ ಪ್ರತಿಕ್ರಿಯಿಸಿದ್ದು, ನಮ್ಮ ಅಭ್ಯರ್ಥಿಗಳ ಫೈನಲ್ ಆಗಬೇಕಿದೆ.. ಸತ್ಯಮೇವ ಜಯತೆ ಸಮಾವೇಶ ಆಗುತ್ತೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ