ಕೇರಳಕ್ಕೆ 10 ಕೋಟಿ ನೆರವು: ಹೆಚ್ಡಿಕೆ

ಶುಕ್ರವಾರ, 10 ಆಗಸ್ಟ್ 2018 (19:31 IST)
ರಾಜ್ಯ ಸರಕಾರವು ಪ್ರವಾಹ ಪೀಡಿತವಾಗಿರುವ ಕೇರಳಕ್ಕೆ 10 ಕೋಟಿ ನೆರವು ನೀಡಲು ಮುಂದಾಗಿದೆ. ನೆರವಿನ ಜತೆಗೆ ವೈದ್ಯರ ತಂಡ ಹಾಗೂ ಆಹಾರ ಸಾಮಗ್ರಿಗಳನ್ನು ರವಾನಿಸುತ್ತಿದೆ.
ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ ಆಗಿರುವ ಅನಾಹುತ ಹಾಗೂ ನಷ್ಟ ಹಾಗೂ ಜೀವಹಾನಿ ಬಗ್ಗೆ ಹೆಚ್.ಡಿ.ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಅಲ್ಲಿನ ಸ್ಥಿತಿಗತಿ ಬಗ್ಗೆ ವಿವರ ಪಡೆದುಕೊಂಡಿದ್ದಾರೆ. ಅಲ್ಲದೇ ಸಾವು ನೋವು ಕುರಿತು ಖೇದ ವ್ಯಕ್ತಪಡಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ