100 ದಿನ-ನೂರಾರು ದಿನ ಕೈಪಿಡಿ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಸೋಮವಾರ, 26 ಆಗಸ್ಟ್ 2013 (13:51 IST)
PR
PR
ಬೆಂಗಳೂರು: ಕಾಂಗ್ರೆಸ್ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ 100 ದಿನ-ನೂರಾರು ದಿನ ನಿರ್ಣಯ ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ 100 ದಿನಗಳನ್ನು ಪೂರೈಸಿದ ಅದ್ಧೂರಿ ಸಮಾರಂಭವನ್ನು ಹಮ್ಮಿಕೊಳ್ಳುವುದಿಲ್ಲ ಎಂದು ತಿಳಿಸಿದರು. 100 ದಿನಗಳಲ್ಲಿ ಸರ್ಕಾರದ ಸಾಧನೆ ಅಳೆಯುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಅವರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಅವಧಿಯಲ್ಲಿ ಹಲವು ಎಡರುತೊಡರುಗಳು ಎದುರಾಗಿವೆ. ಮೂರು ಚುನಾವಣೆಗಳನ್ನು ಎದುರಿಸಿ ಗೆದ್ದಿದ್ದೇವೆ. ಅನ್ನಭಾಗ್ಯ ಯೋಜನೆ ಯಶಸ್ವಿಯಾಗಿದೆ. ಇವು ಬಡವರ ಕಾರ್ಯಕ್ರಮಗಳು. ಬಡವರ ಕಾರ್ಯಕ್ರಮಗಳನ್ನು ಆತುರಾತುರವಾಗಿ ಮಾಡಬೇಕು.

100 ದಿನಗಳಲ್ಲಿ 25 ಅಧಿವೇಶನಗಳನ್ನು ನಡೆಸಿದ್ದೇವೆ ಎಂದು 100 ದಿನಗಳಲ್ಲಿ ಸರ್ಕಾರದ ಸಾಧನೆಗಳನ್ನು ಸಿದ್ದರಾಮಯ್ಯ ಬಿಚ್ಚಿಟ್ಟರು. 100 ದಿನಗಳಲ್ಲಿ ಸರ್ಕಾರದ ಸಾಧನೆ ಅಳೆಯುವುದು ಸಾಧ್ಯವಿಲ್ಲದಿದ್ದರೂ ಯಾವ ದಾರಿಯಲ್ಲಿ ಹೆಜ್ಜೆ ಇಟ್ಟಿದ್ದೇವೆ ಎಂದು ಗುರುತಿಸುವುದು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು. 1

ವೆಬ್ದುನಿಯಾವನ್ನು ಓದಿ