ಕಾವೇರಿ ವಿಚಾರದಲ್ಲಿ 25 ಸಂಸದರು ರಾಜ್ಯದ ಜೊತೆಯಿದ್ದೇವೆ-ತೇಜಸ್ವಿ ಸೂರ್ಯ

ಶನಿವಾರ, 30 ಸೆಪ್ಟಂಬರ್ 2023 (16:32 IST)
ಕಾವೇರಿ ನದಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು 25 ಸಂಸದರು ರಾಜ್ಯದ ಜತೆಗಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನವರು 25 ಬಿಜೆಪಿ ಸಂಸದರ ಬಗ್ಗೆ ಮಾತನಾಡುತ್ತಾರೆ. ಕಾವೇರಿ ನೀರಿನ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಹಿಂದೆ, ಈಗ ಮತ್ತು ಮುಂದೆಯೂ ಕರ್ನಾಟಕದ ಜೊತೆಗಿದೆ. ರಾಜ್ಯದ 25 ಸಂಸದರು ಸಹ ರಾಜ್ಯದ ನೆಲ, ಜಲದ ಪರವಾಗಿದ್ದಾರೆ ಎಂದು ತಿಳಿಸಿದರು.ನಾವು ನೀರಿನಲ್ಲಿ ರಾಜಕೀಯ ಮಾಡುತ್ತಿಲ್ಲ. ರಾಜ್ಯಕ್ಕೆ ನಮ್ಮ ಬದ್ಧತೆ ಇದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಪರವಾಗಿ ಸಂಸದರು ನಿಂತಿದ್ದಾರೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ