ಶಾಂತಮೂರ್ತಿ, ಶ್ರೇಯಸ್, ಆಕಾಂಕ್ಷ ಪಲ್ಲಕ್ಕಿ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಮೃತರಲ್ಲಿ ಇಬ್ಬರು 10ನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಮತ್ತೊಬ್ಬ 8ನೇ ತರಗತಿ ಓದುತ್ತಿದ್ದ.
ಯಾವ ಕಾರಣದಿಂದ ಈ ಅಚಾತುರ್ಯ ನಡೆಯಿತು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಶಾಸಕರು, ಯಾರೋ ಹೊರಗಿನವರು ಬಂದು ಊಟದಲ್ಲಿ ವಿಷ ಬೆರೆಸಿರಬಹುದು ಎಂಬ ಅನುಮಾನವಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದೇನೆ ಎಂದಿದ್ದಾರೆ.