ತುಮಕೂರಿನಲ್ಲಿ ಪಿಯುಸಿ ವಿದ್ಯಾರ್ಥಿನಿಯನ್ನು ಅಪಹರಣ ಮಾಡಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಜುಲೈ 24ರಂದು ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುತ್ತಿದ್ದಾಗ ನಾಲ್ವರು ಆರೋಪಿಗಳು ಅಪಹರಿಸಿ ಕರೆದುಕೊಂಡು ಹೋಗಿದ್ದರು. ಯುವತಿ ಒಂಟಿಯಾಗಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಯುವಕರು ಅಪಹರಿಸಿದ್ದರು.
ಯುವತಿಯನ್ನು ಅಪಹರಿಸಲು ಮುಖ್ಯ ಕಾರಣ ಮಧು ಎಂಬವ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿಯನ್ನು ಅಪಹರಿಸಿ ಮದುವೆ ಒತ್ತಡ ಹಾಕಬೇಕೆಂಬ ಉದ್ದೇಶದಿಂದ ಈ ದುಷ್ಕೃತ್ಯಕ್ಕೆ ಕೈಹಾಕಿದ್ದ. ಕಾರಿನಲ್ಲಿ ಯುವತಿಯನ್ನು ಪ್ರೀತಿಸುತ್ತಿರುವ ವಿಷಯವನ್ನು ತಿಳಿಸಿ, ನನ್ನನ್ನೇ ಮದುವೆಯಾಗಬೇಕೆಂದು ಒತ್ತಾಯಿಸಿದ.
ಆಗ ಯುವತಿ ರಮ್ಯಾ ಸ್ವಲ್ಪ ಜಾಣ್ಮೆ ಉಪಯೋಗಿಸಿ ಮನೆಯವರಿಗೆ ಹೇಳಿ ನಿನ್ನನ್ನೇ ಮದುವೆಯಾಗುತ್ತೇನೆ ಎಂದು ಭರವಸೆ ನೀಡಿದಳು. ಆಗ ಮಧು ಯುವತಿಯನ್ನು ಬಿಡುಗಡೆ ಮಾಡಿದ ಬಳಿಕ ಯುವತಿ ಪೋಷಕರಿಗೆ ಈ ಕುರಿತು ಮಾಹಿತಿ ನೀಡಿದ್ದರಿಂದ ಮನೆಯವರು ಪೊಲೀಸರಿಗೆ ದೂರು ನೀಡಿದರು. ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.