ಬೆಳಗಾವಿ ಬಳಿ ಸಂಭವಿಸಿದ ರಸ್ತೆ ಅಪಘಾತ :ಮೃತರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

ಭಾನುವಾರ, 26 ಜೂನ್ 2022 (16:13 IST)
ಬೆಳಗಾವಿಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ತಲಾ 5 ಲಕ್ಷಗಳ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗವಾವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬೆಳಗಾವಿಯಲ್ಲಿ  ನಡೆದ ಭೀಕರ ರಸ್ತೆ ಅಪಘಾತ ಸಂಭವಿಸಿರುವುದುಅತ್ಯಂತ ದು:ಖಕರ ಸಂಗತಿ. ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆಯ ವ್ಯವಸ್ಥೆ ಪೂರೈಸಲು ಈಗಾಗಲೇ ಸೂಚನೆ ನೀಡಲಾಗಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ 5 ಲಕ್ಷ ರೂ.ಗಳ ಪರಿಹಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ.  ಗಾಯಗೊಂಡವರಿಗೆ ಸರ್ಕಾರದ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿ 5 ಲಕ್ಷ ರೂ. ಪರಿಹಾರ:
ಅಪಘಾತಕ್ಕೆ ಒಳಗಾದವರಲ್ಲಿ 5 ಜನ ಕಾರ್ಮಿಕರಿದ್ದು, ಅವರಿಗೆ ಕಾರ್ಮಿಕ ಇಲಾಖೆಯಿಂದ ಹೆಚ್ಚುವರಿಯಾಗಿ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಲು ತೀರ್ಮಾನಿಸಲಾಗಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ