ಲಾಕ್ ಡೌನ್ ನಿಂದ ರೈತ ಆತ್ಮಹತ್ಯೆ : 5 ಲಕ್ಷ ರೂ. ಪರಿಹಾರ ವಿತರಿಸಿದ ಸಚಿವ

ಮಂಗಳವಾರ, 7 ಏಪ್ರಿಲ್ 2020 (16:27 IST)
ಲಾಕ್ ಡೌನ್ ಕಾರಣದಿಂದ ಆತ್ಮಹತ್ಯೆಗೆ ಮಾಡಿಕೊಂಡ ರೈತನ ಕುಟುಂಬಕ್ಕೆ ಕೃಷಿ ಸಚಿವರು 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.

ಕೊರೋನಾ ಸೋಂಕಿನಿಂದ ಲಾಕ್ ಡೌನ್ ಪರಿಣಾಮ ಬೆಳೆದ‌ ಕಲ್ಲಂಗಡಿಯನ್ನು ಮಾರಾಟಕ್ಕೆ ಸಾಗಾಣಿಕೆ ಮಾಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆಗೆ ಶರಣಾದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಲಾಡ್‌ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ‌ ನಾಗೀಂದ್ರಪ್ಪ ಬಿರಾದರ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮೃತ ರೈತನ ಮನೆಗೆ ಭೇಟಿ ನೀಡಿದ ಕೃಷಿ ಸಚಿವ ಬಿ‌.ಸಿ.ಪಾಟೀಲ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಆದೇಶವನ್ನು ಮೃತ ರೈತನ ಪತ್ನಿಗೆ ನೀಡಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ