ಮರ ಬಿದ್ದು ಮೃತಪಟ್ಟ ಹುಡುಗನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ಶುಕ್ರವಾರ, 8 ಜುಲೈ 2022 (20:22 IST)
ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಜುಲೈ 3ರಂದು 13 ವರ್ಷದ ರಾಕೇಶ್ ತಲೆಯ ಮೇಲೆ ಮರದ ಕೊಂಬೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳೆದ ಯುವಕನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರದ ಚೆಕ್ ವಿತರಣೆ ಮಾಡಲಾಗಿದೆ. ಮರದ ಕೊಂಬೆಯಿಂದ ಮೃತಪಟ್ಟಿರುವ ಘಟನೆ ತಿಳಿದ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಕೂಡಲೆ ಪರಿಹಾರ ನೀಡಲು ವಲಯ ಆಯುಕ್ತರಿಗೆ ಸೂಚನೆ ನೀಡಿದ್ದರು. ಅದರಂತೆ ಇಂದು ಪಾಲಿಕೆ ಕೇಂದ್ರ ಕಛೇರಿಯಲ್ಲಿ ಪೂರ್ವ ವಲಯ ಆಯುಕ್ತರು ಹಾಗೂ ಯೋಜನಾ ವಿಭಾಗದ ವಿಶೇಷ ಆಯುಕ್ತರಾಗಿರುವ ಪಿ.ಎನ್.ರವೀಂದ್ರ ರವರು ರಾಕೇಶ್ ಪೋಷಕರಾದ ತಂದೆ ಸರವಣ್ಣ, ತಾಯಿ ಯಮುನಾ ರವರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ