ಬೆಂಗಳೂರು: ರಾಜ್ಯದಲ್ಲಿ ಸಚಿವ ಸಂಪುಟದಲ್ಲಿ ವಿಸ್ತರಣೆ ಮತ್ತು ನಿಗಮ, ಮಂಡಳಿಗಳಿಗೆ ನೇಮಕಕ್ಕೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಂತ್ರಿಗಿರಿಯ ಮೇಲೆ ಮತ್ತು ನಿಗಮ, ಮಂಡಳಿಗಳ ಮೇಲೆ ಶಾಸಕರ ಕಣ್ಣು ಇದೀಗ ಬಿದ್ದಿದೆ. ಹೇಗಾದರೂ ಮಾಡಿ ಮಂತ್ರಿಸ್ಥಾನವನ್ನು ದಕ್ಕಿಸಿಕೊಳ್ಳಲು ಸಚಿವ ಸ್ಥಾನದ ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ.
8 ಶಾಸಕರು ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ತಮಗೆ ಸಚಿವ ಸ್ಥಾನಕ್ಕೆ ಪರಿಗಣಿಸಬೇಕೆಂದು ಲಾಬಿ ನಡೆಸಲಿದ್ದಾರೆ. ವಿನಯ್ ಕುಲಕರ್ಣಿ, ಈಶ್ವರ್ ಖಂಡ್ರೆ, ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಸೇರಿದಂತೆ 8 ಶಾಸಕರು ಇವರ ಪೈಕಿ ಸೇರಿದ್ದಾರೆ.