ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ

ಭಾನುವಾರ, 8 ಜನವರಿ 2023 (19:49 IST)
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯುತ್ತಿದೆ. ಮುಂದಿನ ವರ್ಷ 87ನೇ ಅಖಿಲ ಭಾರತ ಕನ್ನಡದ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಈ ಕುರಿತು ಮಂಡ್ಯ ಜಿಲ್ಲೆಯ ಕಸಾಪ ಜಿಲ್ಲಾಧ್ಯಕ್ಷ C.K.ರವಿಕುಮಾರ್‌ ಚಮಲಾಪುರ ಮಾತನಾಡಿದ್ದು, ಡಾ.ಮಹೇಶ ಜೋಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಂಡ್ಯದಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್​​​ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ, ಮನು ಬಳಿಗಾರ್​​ ಮಾರ್ಗದರ್ಶನಲ್ಲಿ ಮಂಡ್ಯದಲ್ಲಿ ಸಮ್ಮೇಳನ ಮಾಡುತ್ತೇವೆ ಎಂದು ತಿಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ