ವಿಧಾನಸಭೆ ಉಪಚುನಾವಣೆ: 9 ಕೋಟಿ ರೂ. ಅಕ್ರಮ ಹಣ ಜಪ್ತಿ

ಬುಧವಾರ, 20 ಆಗಸ್ಟ್ 2014 (16:13 IST)
ನಾಳೆ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಂದರ್ಭದಲ್ಲಿ ಅಕ್ರಮ ಹಣ ಸಾಗಣೆ ಪ್ರಕರಣವೊಂದು ವರದಿಯಾಗಿದ್ದು, ಚಿಕ್ಕೋಡಿ-ಸಾದಲಗಾ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.

ಸಂಕೇಶ್ವರ ಚೆಕ್‌‍ಪೋಸ್ಟ್ ಬಳಿ ಹಣ ಜಪ್ತಿ ಮಾಡಲಾಗಿದೆ. ನಿಪ್ಪಾಣಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣೆ ಅಧಿಕಾರಿಗಳು ಈ ಲಾರಿಯನ್ನು ವಶಕ್ಕೆ ತೆಗೆದುಕೊಂಡು ಹಣವನ್ನು ಜಪ್ತಿಮಾಡಿದರು.

ಚುನಾವಣೆಯಲ್ಲಿ ಅಕ್ರಮವಾಗಿ ಹಣ ವಿತರಣೆಯಾಗುತ್ತಿರುವುದಕ್ಕೆ ಇದು ಸಾಕ್ಷಿಯೊದಗಿಸಿದೆ. ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿಯ ಚಿಕ್ಕೋಡಿ, ಬಳ್ಳಾರಿ ಗ್ರಾಮಾಂತರ ಮತ್ತು ಶಿವಮೊಗ್ಗದ ಶಿಕಾರಿಪುರ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದ್ದು, ಚುನಾವಣೆ ಪ್ರಚಾರ ನಿನ್ನೆಗೆ ಅಂತ್ಯಗೊಂಡಿದೆ. 
 

ವೆಬ್ದುನಿಯಾವನ್ನು ಓದಿ