ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ

ಶನಿವಾರ, 8 ಅಕ್ಟೋಬರ್ 2022 (19:46 IST)
ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕೊಟ್ಗಾ ಗ್ರಾಮದಲ್ಲಿ ನಡೆದಿದೆ. ಚಂದನಕೇರಾ ಗ್ರಾಮದ 20 ವರ್ಷದ ಮೋಹನ್ ಎಂಬ ಯುವಕ ಕೊಲೆಯಾಗಿದ್ದು, ಕುಡಿದ ಮತ್ತಿನಲ್ಲಿ ಸ್ನೇಹಿತರೇ ಮೋಹನ್​​ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಳೆ ವೈಷಮ್ಯದ ಹಿನ್ನಲೆಯಲ್ಲಿ ಆನಂದ ಮತ್ತು ಭೀಮಾ ಎಂಬ ಆರೋಪಿಗಳು ಮೋಹನ್​ನನ್ನು ಕೊಲೆ ಮಾಡಿದ್ದಾರೆ. ರಟಕಲ್ ಠಾಣೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಈ ಸಂಬಂಧ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ