ಗಾಯಾಳು ಮಗುವನ್ನು ನಿನ್ನೆ ಸೇಂಟ್ ಜಾನ್ ಎಂಬ ಖಾಸಗಿ ಆಶ್ಪತ್ರೆ, ಸರ್ಕಾರಿ ಆಸ್ಪತ್ರೆಯಾದ ನಿಮ್ಹಾನ್ಸ್ ಗಳಲ್ಲಿ ಸುತ್ತಾಡಿದ ಬಳಿಕ ವೈದ್ಯರ ಸಲಹೆ ಮೇರೆಗೆ ಇಂದಿರಾ ಗಾಂಧಿ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ವೈದ್ಯರು ದಾಖಲೇ ಮಾಡಿಕೊಳ್ಳದೆ ವೆಂಟಿಲೇಟರ್ ಇಲ್ಲ ಎಂಬ ಕಾರಣ ನೀಡಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ವೆಂಕಟೇಶ್ ದೂರು ನೀಡಿದ್ದು, ಪೊಲೀಸರು ಭಾರತೀಯ ದಂಡ ಸಂಹಿತೆ 304(ಎ)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಡು ತನಿಖೆ ನಡೆಸುತ್ತಿದ್ದಾರೆ.