ಮಂಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹತ್ಯೆಗೆ ಸಂತಾಪ ಸೂಚಿಸುವ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಾಮ್ಯಸೇವಕ ಸಂಘದ (ಆರ್ಎಸ್ಎಸ್) ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮೇ 12 ರಂದು ಕಾವಳಪಡೂರು ಗ್ರಾಮದ ಮದ್ವ ಅರಮನೆ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಭಾಷಣ ಮಾಡಿದ್ದರು.
ಪೊಲೀಸರ ಪ್ರಕಾರ, ಕಲ್ಲಡ್ಕ ಪ್ರಭಾಕರ ಭಟ್ ಅವರು ಸಮಾರಂಭದಲ್ಲಿ ಭಾಗವಹಿಸಿದ್ದ ಸುಮಾರು 500 ಜನರನ್ನುದ್ದೇಶಿಸಿ ಮಾತನಾಡಿದದರು.
ಈ ವೇಳೆ ಅವರು “ಸಾಮಾಜಿಕ ಸಾಮರಸ್ಯವನ್ನು ಕದಡುವ, ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉಂಟುಮಾಡುವ ಮತ್ತು ಕೋಮು ಸೌಹಾರ್ದತೆಯನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ಆರೋಪಿಸಲಾಗಿದೆ. ಇದರ ಹಿನ್ನೆಲೆ ಅವರ ವಿರುದ್ಧ ವಿಭಾಗ 353(2) ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ದೃಢಪಡಿಸಿದರು.
ಪೊಲೀಸರ ಪ್ರಕಾರ, ಮೇ 1 ರಂದು ಅಪರಿಚಿತರಿಂದ ನಡೆದ ಯುವಕ ಸುಹಾಸ್ ಶೆಟ್ಟಿ ಹತ್ಯೆಗೆ ಸಂತಾಪ ಸೂಚಿಸುವ ಕಾರ್ಯಕ್ರಮವೊಂದರಲ್ಲಿ ಆರ್ಎಸ್ಎಸ್ ಮುಖಂಡ ಮಾತನಾಡುತ್ತಿದ್ದರು.