ನಿನ್ನೆ ನಗರದ ಥಣಿಸಂದ್ರ ವ್ಯಾಪ್ತಿಯಲ್ಲಿರುವ ಅಶೋಕ್ ನಗರದ ನಿವಾಸಿ, ಬಾಲಕ ಪ್ರಕಾಶ್(15) ಎಂಬ ಬಾಲಕ ನಿನ್ನೆ ಸಂಜೆ ಆಟವಾಡುತ್ತಿದ್ದ ವೇಳೆ ನಗರದ ವೀರಣ್ಣನ ಪಾಳ್ಯದ ಬಳಿಯ ರಾಜಾ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಾಲಕನ ಮೃತ ದೇಹ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದರು. ಪರಿಣಾಮ ಇಂದು ಅಂತಿಮವಾಗಿ ಬಾಲಕನ ದೇಹ ಪತ್ತೆಯಾಗಿದೆ.
ಇನ್ನು ಈ ಕಾರ್ಯಾಚರಣೆಯು ಬಿಬಿಎಂಪಿಯ ಮೇಯರ್ ಮಂಜುನಾಥ್ ರೆಡ್ಡಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಮೃತ ಬಾಲಕನ ಕುಟುಂಬಸ್ಥರಿಗೆ ಬಿಬಿಎಂಪಿ ವತಿಯಿಂದ ಸೂಕ್ತ ಪರಿಹಾರ ಕೊಡಲಿದ್ದೇವೆ. ಅಲ್ಲದೆ ಇಲ್ಲಿನ ಮಾನ್ಯತಾ ಟೆಕ್ ಪಾರ್ಕ್ನಲ್ಲಿ ಅಳವಡಿಸಲಾಗಿದ್ದ ಪೈಪೇ ಈ ದುರ್ಘಟನೆಗೆ ಕಾರಣವಾಗಿರಬಹುದು. ಆದ್ದರಿಂದ ಪೈಪು ತೆರವುಗೊಳಿಸುವಂತೆ ಸೂಕ್ತ ಕ್ರಮಕ್ಕೆ ಆದೇಶಿಸಿದ್ದೇನೆ ಎಂದರು.