ಆತ್ಮಹತ್ಯೆಗೆ ಶರಣಾದ ರೈತನನ್ನು ರಾಮಣ್ಣ ತಳವಾರ(58) ಎಂದು ಹೇಳಲಾಗಿದ್ದು, ತಾಲೂಕಿನ ಬಂಡಿವಾಡ ಗ್ರಾಮದ ನಿವಾಸಿಯಾಗಿದ್ದಾನೆ. ಈತ 3 ಎಕರೆ ಜಮೀನನ್ನು ಹೊಂದಿದ್ದು, ಇತ್ತೀಚೆಗೆ ಮೆಣಸಿನಕಾಯಿ ಬೆಳೆಯನ್ನು ಬೆಳೆದಿದ್ದ. ಆದರೆ ಮುಂಗಾರು ಕೈ ಕೊಟ್ಟ ಕಾರಣ ಬೆಳೆ ಹಾನಿಗೊಳಗಾಗಿತ್ತು. ಅಲ್ಲದೆ ಬೆಳೆಗಾಗಿ ಬ್ಯಾಂಕ್ವೊಂದರಲ್ಲಿ 1 ಲಕ್ಷ ಹಾಗೂ 1ಲಕ್ಷ ಕೈಸಾಲ ಮಾಡಿಕೊಂಡಿದ್ದ ಎನ್ನಲಾಗಿದ್ದು, ಸಾಲ ಬಾಧೆ ತಾಳಲಾರದೆ ನೇಣಿಗೆ ಶರಣಾಗಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 12 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.