ಮಗುವನ್ನು ಗೋಡೆಗೆ ಎಸೆದು ಹತ್ಯೆ ಮಾಡಿದ ಮಾವ

ಶನಿವಾರ, 30 ಏಪ್ರಿಲ್ 2022 (20:04 IST)
ಎಂಟು ತಿಂಗಳ ಮಗುವನ್ನು ಸೋದರ ಮಾವನೇ ಗೋಡೆಗೆ ಬಡಿದು ಹತ್ಯೆ ಮಾಡಿರುವ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಕನಕಗಿರಿ ನಿವಾಸಿ ರಾಜು (33) ಎಂಬಾತ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಕುಡಿತಕ್ಕೆ ಹಣ ನೀಡಿಲ್ಲ ಅಂತಾ ತಂಗಿ ಮಗು ಕೊಂದಿದ್ದಾನೆ ಎಂಬ ಮಾಹಿತಿ ಇದ್ದು ಈತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ಇನ್ಸ್​​​​​ಪೆಕ್ಟರ್​​ ರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ