ಕೆಲಸ ಕಳೆದುಕೊಂಡಿದ್ದಕ್ಕೆ ಮಕ್ಕಳನ್ನು ಕೊಂದು ರೈಲಿಗೆ ತಲೆಕೊಟ್ಟ ತಂದೆ

ಸೋಮವಾರ, 10 ಫೆಬ್ರವರಿ 2020 (14:31 IST)
ಕೆಲಸ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ತನ್ನ ಮಕ್ಕಳಿಬ್ಬರನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಕ್ಕಳಾದ ಶ್ರೇಯಾಂಶ್ ಮತ್ತು ಸಮೀಕ್ಷಾ ರನ್ನು ಕೊಲೆ ಮಾಡಿದ ತಂದೆ ಮಧುರ್ ಬಳಿಕ ತಾನೂ ಮೆಟ್ರೋ ರೈಲಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಕೆಲಸ ಕಳೆದುಕೊಂಡಿದ್ದು ಹಾಗೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲಾಗುತ್ತಿಲ್ಲ ಅಂತ ಖಿನ್ನತೆಗೆ ಒಳಗಾಗಿ ಈ ನಿರ್ಧಾರಕ್ಕೆ ಬಂದಿದ್ದ ಎನ್ನಲಾಗ್ತಿದೆ.

ದೆಹಲಿಯಲ್ಲಿ ಘಟನೆ ನಡೆದಿದ್ದು, ಪತ್ನಿ ರೂಪಾಲಿ ಮಾರುಕಟ್ಟೆಗೆ ಹೋಗಿದ್ದಾಗ ತಂದೆ ಈ ಕೃತ್ಯ ವೆಸಗಿದ್ದ ತಂದೆ ಕೊನೆಗೆ  ತಾನೂ ಪ್ರಾಣ ಕಳೆದುಕೊಂಡಿದ್ದಾನೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ