ಪ್ರಧಾನಿ ಮೋದಿಗೆ ನೀಡಲು ಸಿದ್ಧವಾಗಿದೆ ಉಡುಗೊರೆ

ಗುರುವಾರ, 12 ಜನವರಿ 2023 (08:26 IST)
ಹುಬ್ಬಳ್ಳಿಗೆ ಬರುತ್ತಿರುವ ಪ್ರಧಾನಿ ಮೋದಿಗಾಗಿ ಬಿದರಿ ಕಲೆಯಲ್ಲಿ ಅರಳಿದ ಸ್ವಾಮಿ ವಿವೇಕಾನಂದರ ಮನಮೋಹಕ ಮೂರ್ತಿಯನ್ನು ಸ್ಮರಣಿಯಾಗಿ ನೀಡಿ ಗೌರವಿಸಲಾಗುತ್ತಿದೆ.

ಧಾರವಾಡ ಜಿಲ್ಲೆಯ ಗರಗ ಹಾಗೂ ಬೆಂಗೇರಿಯಲ್ಲಿ ತಯಾರಿಸಲಾದ ತಿರಂಗವನ್ನು ಸಹ ಉಡುಗೊರೆಯಾಗಿ ನೀಡಿ ಗೌರವಿಸಲಾಗುತ್ತಿದೆ. ಹಾವೇರಿಯ ಏಲಕ್ಕಿ ಹಾರವನ್ನು ಸಿದ್ಧಪಡಿಸಲಾಗಿದೆ.

ಮೋದಿ ಆಗಮನದಿಂದಾಗಿ ನಗರದ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೋದಿ ಸಾಗುವ ಹಾದಿಯಲ್ಲಿ ಸಾರ್ವಜನಿಕ ಸಂಚಾರ ನಿಷೇಧಿಸಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ಸಂಜೆ 7 ಗಂಟೆಯವರಿಗೆ ನಿರ್ಬಂಧವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ