ಕಂಠಪೂರ್ತಿ ಕುಡಿದು ಸಹದ್ಯೋಗಿ ಮೇಲೆ ಹಲ್ಲೆ ನಡೆಸಿದ ಸರ್ಕಾರಿ ನೌಕರ

ಗುರುವಾರ, 14 ಡಿಸೆಂಬರ್ 2017 (09:09 IST)
ಸರ್ಕಾರಿ ನೌಕರನೊಬ್ಬ ಕಂಠಪೂರ್ತಿ ಕುಡಿದು ಕಚೇರಿಗೆ ಬಂದು ನೌಕರನೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ನೆಲಮಂಗಲದ ಹೊರ ವಲಯದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿಗೆ ಕಂಠ ಪೂರ್ತಿ ಕುಡಿದು ಬಂದ ಸರ್ಕಾರಿ ನೌಕರ ಸುರೇಶ್ ಇನ್ನೋರ್ವ ನೌಕರ ಉಮೇಶ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸುರೇಶ್ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಹಾಯಕನಾಗಿ ಕೆಲಸ ನಿರ್ವಹಿಸುತ್ತಿದ್ದು, ಕ್ಷುಲಕ ಉಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಆದರೆ, ಕಚೇರಿಯಲ್ಲಿನ ಉನ್ನತ ಅಧಿಕಾರಿಗಳು ತಮಗೇಕೆ ಈ ಗೋಜು ಎಂದು ಸುಮ್ಮನಾಗಿದ್ದಾರೆ. ನಂತರ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಕುಡುಕನಿಗೆ ವಾರ್ನ್ ಮಾಡಿ ಕಳುಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ