ರಾಜ್ಯ ಬಜೆಟ್ ನಲ್ಲಿ ಮಹಿಳಾ ಕಾರ್ಮಿಕರಿಗೆ ಭರ್ಜರಿ ಆಫರ್

ಗುರುವಾರ, 5 ಮಾರ್ಚ್ 2020 (13:21 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರು ಇಂದು 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆಮಾಡಿದ್ದು, ಇದರಲ್ಲಿ ಮಹಿಳಾ ಕಾರ್ಮಿಕರಿಗೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದಾರೆ.


ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ವನಿತಾ ಸಂಗಾತಿ ಯೋಜನೆ ಜಾರಿಗೆ ತರಲಿದೆ.ಹಾಗೇ  ಮಾಸಿಕ ಬಸ್  ಪಾಸ್ ವಿತರಣೆಗೆ 25 ರೂ.ಕೋಟಿ ಅನುದಾನ ನೀಡಲಿದೆ.


ಕಟ್ಟಡ ಕಾರ್ಮಿಕರಿಗಾಗಿ 10 ಮೊಬೈಲ್ ಕ್ಲಿನಿಕ್ ಗಳ ಆರಂಭ ಹಾಗೂ ಮುಖ್ಯಮಂತ್ರಿಗಳ ಆರೋಗ್ಯ ಸುರಕ್ಷಾ ಯೋಜನೆ ಜಾರಿ ಮಾಡಲಿದೆ. ಇದರಿಂದ  1 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಅನುಕೂಲವಾಗಲಿದೆ.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ