ಶಾಂತವೇರಿ ದರ್ಗಾದಲ್ಲಿ ದಾಂಧಲೆ ನಡೆಸಿದ ಯುವಕರ ಗುಂಪು

ಮಂಗಳವಾರ, 26 ಡಿಸೆಂಬರ್ 2023 (16:21 IST)
ದತ್ತಪೀಠಕ್ಕೆ ತೆರಳುತ್ತಿದ್ದ ಯುವಕರ ಗುಂಪು ತರೀಕೆರೆ ತಾಲೂಕಿನ ಶಾಂತವೇರಿ ಗ್ರಾಮದ ದರ್ಗಾದಲ್ಲಿ ದಾಂಧಲೆ ನಡೆಸಿದೆ. ಗೋರಿಗಳ ಮೇಲೆ ಹೊದಿಸಿದ್ದ ಬಟ್ಟೆ ತೆಗೆದು ಮತ್ತು ಅಲ್ಲಿದ್ದ ವಸ್ತುಗಳನ್ನು ಹೊರಕ್ಕೆ ಎಸೆದು ದಾಂಧಲೆ ನಡೆಸಿದೆ. ಈ ವೇಳೆ ಪ್ರಶ್ನಿಸಲು ಹೋದ ಪೊಲೀಸರ ಮೇಲೂ ಯುವಕರ ಗುಂಪು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕಂಡು ಬಂದಿದ್ದು ಶಾಂತವೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ