ಮಗನ ಹೆಗಲ ಮೇಲೆ ಬಂದೂಕಿಟ್ಟು ಡಿಕೆಶಿಗೆ ಸಿದ್ದು ಗುಂಡು-ಪ್ರತಾಪ ಸಿಂಹ

geetha

ಗುರುವಾರ, 18 ಜನವರಿ 2024 (17:12 IST)
ಬೆಂಗಳೂರು-ಸಿದ್ದರಾಮಯ್ಯ ತಮ್ಮ ಮಗನ ಹೆಗಲ ಮೇಲೆ ಬಂದೂಕು ಇಟ್ಟು ಡಿ.ಕೆ.ಶಿವಕುಮಾರ್ ಎದೆಗೆ ಗುಂಡು ಹೊಡೆಯುತ್ತಿದ್ದಾರೆ ಎಂದು ಸಂಸದ ಪ್ರತಾಪ ಸಿಂಹ ಆರೋಪಿಸಿದರು. ಸುದ್ದಿಗಾರರೊಡನೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ನೋಡಿದರೆ ಅಯ್ಯೋ ಪಾಪ ಅನ್ನಿಸುತ್ತೆ. ಎಸ್.ಎಂ. ಕೃಷ್ಣ ಬಳಿಕ ಮತ್ತೊಮ್ಮೆ ಸಿಎಂ ಆಗುವ ಅವಕಾಶ ನಿಮ್ಮ ಮನೆ ಬಾಗಿಲಿಗೆ ಬಂದಿದೆ ಎಂದು ಹಳೇ ಮೈಸೂರು ಭಾಗದಲ್ಲಿ ಪ್ರಚಾರ ಮಾಡೋ ಸಂದರ್ಭದಲ್ಲಿ ಮಾತನಾಡಿದ್ದಾರೆ.

ವೆಬ್ದುನಿಯಾವನ್ನು ಓದಿ